ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆ ಸೋಮವಾರ ಮಹತ್ವದ ಮಾತುಕತೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಆಗಸ್ಟ್ 23 ರಿಂದಲೇ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಘೋಷಿಸಿದರು.
ಉಪ ಕುಲಪತಿಗಳ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸದಾಗಿ ರೂಪಿಸಲಾಗಿರುವ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ದಾಖಲಾತಿ ಪ್ರಕ್ರಿಯೆ ಆರಂಭ ಮಾಡಲಾಗುವುದು. ಅದರ ಮಾದರಿಯನ್ನೂ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದರು.
10 ವರ್ಷಗಳಲ್ಲೇ ಜಾರಿ:
ಶಿಕ್ಷಣ ನೀತಿ ಜಾರಿಗೆ ಕೇಂದ್ರ ಸರ್ಕಾರ 15 ವರ್ಷ ಕಾಲಾವಕಾಶ ನೀಡಿದ್ದು, ರಾಜ್ಯ ಸರ್ಕಾರ ಹತ್ತೇ ವರ್ಷಗಳಲ್ಲಿ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ.
2021- 22 ನೇ ಸಾಲಿಗೆ ಪದವಿಯ ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ, ಬಿಸಿಎ ಕೋರ್ಸ್ಗಳಿಗೆ ದಾಖಲಾತಿ ಪ್ರಕ್ರಿಯೆಯು ಆನ್ಲೈನ್ ಮುಖಾಂತರ ಇದೇ ತಿಂಗಳು 23ನೇ ತಾರೀಖಿನಿಂದ ಪ್ರಾರಂಭವಾಗುತ್ತದೆ. ಹೆಚ್ಚಿನ ವಿವರಗಳಿಗೆ ಈ ಕೆಳಕಂಡ online-admission ವೆಬ್ಸೈಟ್ಗೆ ಬೇಡಿ ನೀಡತಕ್ಕದ್ದು.
0 Comments